Categories: ಕೋಲಾರ

ಮಾಲೂರು ಭೂದಾಖಲೆ ಇಲಾಖೆಯ ಭ್ರಷ್ಟಾಚಾರದ ತನಿಖೆಗೆ ರೈತ ಸಂಘ ಒತ್ತಾಯ

ಕೋಲಾರ: ಮಾಲೂರಿನ ಸರ್ವೆ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸಿ.ಬಿ.ಐ ಗೆ ಒಪ್ಪಿಸಿ ನೂರಾರು ಹಳ್ಳಿಗಳ ಪಿ-ನಂಬರ್ ದುರಸ್ತಿ ಕಡತಗಳನ್ನು ಎ.ಡಿ.ಎಲ್.ಆರ್. ಕೊಠಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಅಧಿಕಾರಿ ನಿವೇದಿತ, ಭೂದಾಖಲೆಗಳ ಸಹಾಯಕ ನಿರ್ದೇಶಕರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ರೈತರ ಹೆಸರಿನಲ್ಲಿ ಭೂ ಮಾಫಿಯಾ ರವರಿಗೆ ಸರ್ಕಾರಿ ಜಮೀನು ಮಂಜೂರಾತಿಯನ್ನು ರದ್ದು ಮಾಡಬೇಕೆಂದು ರೈತ ಸಂಘದಿಂದ ಮಾಲೂರು ತಾಲ್ಲೂಕು ಕಚೇರಿ ಮುಂದೆ ಪೊರಕೆಗಳನ್ನು ಹಿಡಿದು ಹೋರಾಟ ಮಾಡಿ, ತಾಲ್ಲೂಕು ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗೆ ಹಾಗೂ ಆಯುಕ್ತರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಮಾಲೂರಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ನಿರಂತರವಾಗಿ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವ ಬಗ್ಗೆ ಮತ್ತು ರೈತಾಪಿ ವರ್ಗದ ಜನರ ಯಾವುದೇ ಪೋಡಿ, ಹದ್ದುಬಸ್ತು, ಇ-ಸ್ವತ್ತು, ವಿವಿಧ ಅಳತೆ ಕಾರ್ಯಗಳಿಗಾಗಿ ಮತ್ತು ನಕ್ಷೆಗಳಿಗಾಗಿ ಅಕ್ರಮ ಸಂಭಾವನೆ ಪಡೆಯುತ್ತಿರುವ ಬಗ್ಗೆ ಅನೇಕ ಬಾರಿ ಪ್ರತಿಭಟನೆಗಳು ನಡೆಸಲಾಗಿತ್ತು ಮತ್ತು ಇತ್ತೀಚೆಗೆ ಎಡಿಎಲ್‍ಆರ್ ಅಶ್ವಿನಿ ರವರು ಲಂಚ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲಿಗೆ ಹೋದ ಬೆನ್ನಲ್ಲೆ ಉತ್ತಮವಾದ ಅಧಿಕಾರಿಗಳನ್ನು ನಿಯೋಜಿಸುವ ಬದಲು ಮೇಲಾಧಿಕಾರಿಗಳ ಮೇಲೆ ಜನಪ್ರತಿನಿಧಿಗಳು ಒತ್ತಡ ಹೇರಿ ಮುಳಬಾಗಿಲು ತಾಲ್ಲೂಕಿನಲ್ಲಿ ಅನೇಕ ಅಕ್ರಮಗಳಲ್ಲಿ ಭಾಗಿಯಾಗಿರುವ ಕುಮಾರಿ ನಿವೇದಿತ, ಭೂದಾಖಲೆಗಳ ಸಹಾಯಕ ನಿರ್ದೇಶಕರವರನ್ನು ಪ್ರಭಾರೆ ಎಡಿಎಲ್‍ಆರ್ ಆಗಿ ಹಾಗೂ ಕೋಲಾರದಿಂದ ಭ್ರಷ್ಟ ಅಧಿಕಾರಿ
ರವಿಕುಮಾರ್, ರ‍್ವೆ ಸೂಪರ್ ವೈಸರ್ ರವರನ್ನು ಪ್ರಭಾರೆಯಾಗಿ ನಿಯೋಜಿಸಿದ್ದಾರೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಭ್ರಷ್ಟಾಚಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಜುಲೈ ತಿಂಗಳಲ್ಲಿ ಕೆಲವು ಜನಪ್ರತಿನಿಧಿಗಳು ಸಿಸಿ ಟಿವಿ ಆಫ್ ಮಾಡಿರುತ್ತಾರೆಂದು ದಾಖಲೆಗಳನ್ನು ಸೇರಿಸಿರುತ್ತಾರೆಂದು ದೂರುಗಳ ನೆಪದಲ್ಲಿ ಸಿಸಿ ಟಿವಿ ಫೂಟೇಜಸ್ ಅನ್ನು ಡಿಲೀಟ್ ಮಾಡುವ ಮೂಲಕ ಈ ಹಿಂದಿನ ಎಡಿಎಲ್‍ಆರ್ ಅಶ್ವಿನಿ ರವರು ಮಾಡಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನಾಶ ಮಾಡಿರುತ್ತಾರೆಂದು ಅನೇಕ ಅನುಮಾನಗಳು ಬಂದ
ಹಿಂದೆಯೇ ಈಗ ಮತ್ತೇ ಅಕ್ರಮಗಳಿಗೆ ಅವಕಾಶ ಮಾಡಿಕೊಡುತ್ತಿರುವುದು ಇಲಾಖೆಯ ಕಿರಿಯ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳ ಹಿಡತ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪ ಮಾಡಿದರು.

ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಗಿರೀಶ್, ಮಂಗಸಂದ್ರ ತಿಮ್ಮಣ್ಣ, ಹರೀಶ್ ಸುಪ್ರಿಂ ಚಲ, ವಿನುತ್ ಪಾರುಕ್‍ಪಾಷ, ಬಂಗಾರಿ ಮಂಜು, ವಿಜಯ್‍ಪಾಲ್, ಭಾಸ್ಕರ್, ಶಶಕುಮಾರ್, ಮುನಿರಾಜು, ರತ್ನಮ್ಮ, ಶೈಲಜ, ಗೌರಮ್ಮ, ವೆಂಕಟಮ್ಮ,, ನಾರೆಮ್ಮ,
ಸಾವಿತ್ರಮ್ಮ, ಮುನಿರತ್ನಮ್ಮ, ಸರೋಜಮ್ಮ, ಜಯಲಕ್ಷ್ಮಮ್ಮ, ಮುನಿಯಮ್ಮ, ರಾಮಕ್ಕ ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago