Categories: ಕೋಲಾರ

ಮಾಲೂರು ಭೂದಾಖಲೆ ಇಲಾಖೆಯ ಭ್ರಷ್ಟಾಚಾರದ ತನಿಖೆಗೆ ರೈತ ಸಂಘ ಒತ್ತಾಯ

ಕೋಲಾರ: ಮಾಲೂರಿನ ಸರ್ವೆ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸಿ.ಬಿ.ಐ ಗೆ ಒಪ್ಪಿಸಿ ನೂರಾರು ಹಳ್ಳಿಗಳ ಪಿ-ನಂಬರ್ ದುರಸ್ತಿ ಕಡತಗಳನ್ನು ಎ.ಡಿ.ಎಲ್.ಆರ್. ಕೊಠಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಅಧಿಕಾರಿ ನಿವೇದಿತ, ಭೂದಾಖಲೆಗಳ ಸಹಾಯಕ ನಿರ್ದೇಶಕರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ರೈತರ ಹೆಸರಿನಲ್ಲಿ ಭೂ ಮಾಫಿಯಾ ರವರಿಗೆ ಸರ್ಕಾರಿ ಜಮೀನು ಮಂಜೂರಾತಿಯನ್ನು ರದ್ದು ಮಾಡಬೇಕೆಂದು ರೈತ ಸಂಘದಿಂದ ಮಾಲೂರು ತಾಲ್ಲೂಕು ಕಚೇರಿ ಮುಂದೆ ಪೊರಕೆಗಳನ್ನು ಹಿಡಿದು ಹೋರಾಟ ಮಾಡಿ, ತಾಲ್ಲೂಕು ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗೆ ಹಾಗೂ ಆಯುಕ್ತರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಮಾಲೂರಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ನಿರಂತರವಾಗಿ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವ ಬಗ್ಗೆ ಮತ್ತು ರೈತಾಪಿ ವರ್ಗದ ಜನರ ಯಾವುದೇ ಪೋಡಿ, ಹದ್ದುಬಸ್ತು, ಇ-ಸ್ವತ್ತು, ವಿವಿಧ ಅಳತೆ ಕಾರ್ಯಗಳಿಗಾಗಿ ಮತ್ತು ನಕ್ಷೆಗಳಿಗಾಗಿ ಅಕ್ರಮ ಸಂಭಾವನೆ ಪಡೆಯುತ್ತಿರುವ ಬಗ್ಗೆ ಅನೇಕ ಬಾರಿ ಪ್ರತಿಭಟನೆಗಳು ನಡೆಸಲಾಗಿತ್ತು ಮತ್ತು ಇತ್ತೀಚೆಗೆ ಎಡಿಎಲ್‍ಆರ್ ಅಶ್ವಿನಿ ರವರು ಲಂಚ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲಿಗೆ ಹೋದ ಬೆನ್ನಲ್ಲೆ ಉತ್ತಮವಾದ ಅಧಿಕಾರಿಗಳನ್ನು ನಿಯೋಜಿಸುವ ಬದಲು ಮೇಲಾಧಿಕಾರಿಗಳ ಮೇಲೆ ಜನಪ್ರತಿನಿಧಿಗಳು ಒತ್ತಡ ಹೇರಿ ಮುಳಬಾಗಿಲು ತಾಲ್ಲೂಕಿನಲ್ಲಿ ಅನೇಕ ಅಕ್ರಮಗಳಲ್ಲಿ ಭಾಗಿಯಾಗಿರುವ ಕುಮಾರಿ ನಿವೇದಿತ, ಭೂದಾಖಲೆಗಳ ಸಹಾಯಕ ನಿರ್ದೇಶಕರವರನ್ನು ಪ್ರಭಾರೆ ಎಡಿಎಲ್‍ಆರ್ ಆಗಿ ಹಾಗೂ ಕೋಲಾರದಿಂದ ಭ್ರಷ್ಟ ಅಧಿಕಾರಿ
ರವಿಕುಮಾರ್, ರ‍್ವೆ ಸೂಪರ್ ವೈಸರ್ ರವರನ್ನು ಪ್ರಭಾರೆಯಾಗಿ ನಿಯೋಜಿಸಿದ್ದಾರೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಭ್ರಷ್ಟಾಚಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಜುಲೈ ತಿಂಗಳಲ್ಲಿ ಕೆಲವು ಜನಪ್ರತಿನಿಧಿಗಳು ಸಿಸಿ ಟಿವಿ ಆಫ್ ಮಾಡಿರುತ್ತಾರೆಂದು ದಾಖಲೆಗಳನ್ನು ಸೇರಿಸಿರುತ್ತಾರೆಂದು ದೂರುಗಳ ನೆಪದಲ್ಲಿ ಸಿಸಿ ಟಿವಿ ಫೂಟೇಜಸ್ ಅನ್ನು ಡಿಲೀಟ್ ಮಾಡುವ ಮೂಲಕ ಈ ಹಿಂದಿನ ಎಡಿಎಲ್‍ಆರ್ ಅಶ್ವಿನಿ ರವರು ಮಾಡಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನಾಶ ಮಾಡಿರುತ್ತಾರೆಂದು ಅನೇಕ ಅನುಮಾನಗಳು ಬಂದ
ಹಿಂದೆಯೇ ಈಗ ಮತ್ತೇ ಅಕ್ರಮಗಳಿಗೆ ಅವಕಾಶ ಮಾಡಿಕೊಡುತ್ತಿರುವುದು ಇಲಾಖೆಯ ಕಿರಿಯ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳ ಹಿಡತ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪ ಮಾಡಿದರು.

ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಗಿರೀಶ್, ಮಂಗಸಂದ್ರ ತಿಮ್ಮಣ್ಣ, ಹರೀಶ್ ಸುಪ್ರಿಂ ಚಲ, ವಿನುತ್ ಪಾರುಕ್‍ಪಾಷ, ಬಂಗಾರಿ ಮಂಜು, ವಿಜಯ್‍ಪಾಲ್, ಭಾಸ್ಕರ್, ಶಶಕುಮಾರ್, ಮುನಿರಾಜು, ರತ್ನಮ್ಮ, ಶೈಲಜ, ಗೌರಮ್ಮ, ವೆಂಕಟಮ್ಮ,, ನಾರೆಮ್ಮ,
ಸಾವಿತ್ರಮ್ಮ, ಮುನಿರತ್ನಮ್ಮ, ಸರೋಜಮ್ಮ, ಜಯಲಕ್ಷ್ಮಮ್ಮ, ಮುನಿಯಮ್ಮ, ರಾಮಕ್ಕ ಮುಂತಾದವರು ಇದ್ದರು.

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

50 minutes ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

6 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

13 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago