ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ‌ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಅಧ್ಯಕ್ಷರ ನಿಯೋಗವು ಅಕ್ಟೋಬರ್ 09 ರಂದು ರಾಜಭವನ ಕಚೇರಿಗೆ ಭೇಟಿ ನೀಡಿ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾಲ್ಡೀವ್ಸ್ ನ ವಾಣಿಜ್ಯ ವ್ಯವಹಾರ ಮತ್ತಿತರ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿ ನಂತರ ರಾಜಭವನದಲ್ಲಿ ರಾಜ್ಯಪಾಲರು ಆಯೋಜಿಸಲಾಗಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು.

ನಂತರ ಹೊಟೆಲ್ ತಾಜ್ ವೆಸ್ಟ್ ಎಂಡ್ ನಲ್ಲಿ ದೇಶದ ಮತ್ತು ರಾಜ್ಯದ ವಾಣಿಜ್ಯೋದ್ಯಮಿಗಳೊಂದಿಗೆ ಹಮ್ಮಿಕೊಳ್ಳಲಾದ ಸಭೆಗಳಲ್ಲಿ ಭಾಗವಹಿಸಿ ತಾಜ್‌ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿ ಇಂದು ಅಕ್ಟೋಬರ್ 10 ರಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲೆಗೆ ಪ್ರಯಾಣಿಸಿತು‌.

ಈ ಸಂದರ್ಭದಲ್ಲಿ ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎನ್. ಶಿವಶಂಕರ್, ಪ್ರಾದೇಶಿಕ ಪಾಸ್ ಪೋರ್ಟ್ ಆಧಿಕಾರಿಗಳಾದ ಕೃಷ್ಣ. ಕೆ., ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

46 minutes ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

1 hour ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

2 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

4 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

12 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

12 hours ago