Categories: ಕೋಲಾರ

ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಸಿಪಿಐಎಂ ಪಕ್ಷದಿಂದ ರಸ್ತೆ ತಡೆ

ಕೋಲಾರ: ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ ಮಾವಿನ ಪ್ರತಿ ಕೆಜಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಣೆಗೆ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂಗಳ ಸಿಗುವಂತೆ ಬೆಂಬಲ ಬೆಳೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ ಹವಾಮಾನ ವೈಪರೀತ್ಯಾಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಬಂದು ಕಾಯಿಗಳನ್ನು ತೋಟದಲ್ಲಿ ಹಾಳೆಯುತ್ತಿವೆ ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆ ನಿಲ್ಲಲು ನಮ್ಮ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಮುದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಹಾಗೂ ಡಾ ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರಿಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

2 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

4 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

17 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

24 hours ago