Categories: ಕೋಲಾರ

ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಸಿಪಿಐಎಂ ಪಕ್ಷದಿಂದ ರಸ್ತೆ ತಡೆ

ಕೋಲಾರ: ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ ಮಾವಿನ ಪ್ರತಿ ಕೆಜಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಣೆಗೆ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂಗಳ ಸಿಗುವಂತೆ ಬೆಂಬಲ ಬೆಳೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ ಹವಾಮಾನ ವೈಪರೀತ್ಯಾಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಬಂದು ಕಾಯಿಗಳನ್ನು ತೋಟದಲ್ಲಿ ಹಾಳೆಯುತ್ತಿವೆ ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆ ನಿಲ್ಲಲು ನಮ್ಮ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಮುದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಹಾಗೂ ಡಾ ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರಿಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

11 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

11 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

12 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

17 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

23 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago