Categories: ಕೋಲಾರ

ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಸಿಪಿಐಎಂ ಪಕ್ಷದಿಂದ ರಸ್ತೆ ತಡೆ

ಕೋಲಾರ: ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ ಮಾವಿನ ಪ್ರತಿ ಕೆಜಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಣೆಗೆ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂಗಳ ಸಿಗುವಂತೆ ಬೆಂಬಲ ಬೆಳೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ ಹವಾಮಾನ ವೈಪರೀತ್ಯಾಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಬಂದು ಕಾಯಿಗಳನ್ನು ತೋಟದಲ್ಲಿ ಹಾಳೆಯುತ್ತಿವೆ ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆ ನಿಲ್ಲಲು ನಮ್ಮ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಮುದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಹಾಗೂ ಡಾ ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರಿಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

3 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

11 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

13 hours ago