Categories: ಕೋಲಾರ

ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಸಿಪಿಐಎಂ ಪಕ್ಷದಿಂದ ರಸ್ತೆ ತಡೆ

ಕೋಲಾರ: ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ ಮಾವಿನ ಪ್ರತಿ ಕೆಜಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಣೆಗೆ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂಗಳ ಸಿಗುವಂತೆ ಬೆಂಬಲ ಬೆಳೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ ಹವಾಮಾನ ವೈಪರೀತ್ಯಾಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಬಂದು ಕಾಯಿಗಳನ್ನು ತೋಟದಲ್ಲಿ ಹಾಳೆಯುತ್ತಿವೆ ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆ ನಿಲ್ಲಲು ನಮ್ಮ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಮುದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಹಾಗೂ ಡಾ ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರಿಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

7 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

17 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

18 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago