ಮಾವು ಖರೀದಿ ಕೇಂದ್ರ ಸ್ಥಾಪನೆ: ಪ್ರತಿ ಕ್ವಿಂಟಾಲ್ ಮಾವುಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*

ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.

ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

15 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

16 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

23 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago