ಮಾವು ಖರೀದಿ ಕೇಂದ್ರ ಸ್ಥಾಪನೆ: ಪ್ರತಿ ಕ್ವಿಂಟಾಲ್ ಮಾವುಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*

ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.

ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

23 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago