ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.
*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*
ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.
ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.
ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…