ಮಾವು ಖರೀದಿ ಕೇಂದ್ರ ಸ್ಥಾಪನೆ: ಪ್ರತಿ ಕ್ವಿಂಟಾಲ್ ಮಾವುಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*

ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.

ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

3 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

12 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

22 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

24 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago