ಮಾವು ಖರೀದಿ ಕೇಂದ್ರ ಸ್ಥಾಪನೆ: ಪ್ರತಿ ಕ್ವಿಂಟಾಲ್ ಮಾವುಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*

ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.

ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

6 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

7 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

15 hours ago