ಮಾವು ಖರೀದಿ ಕೇಂದ್ರ ಸ್ಥಾಪನೆ: ಪ್ರತಿ ಕ್ವಿಂಟಾಲ್ ಮಾವುಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

*ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ*

ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆ(ಯುನಿಟ್ ಆಫ್ ಮದರ್ ಡೈರಿ ಫ್ರೂಟ್ ಅಂಡ್ ವೆಜಿಟೇಬಲ್ಸ್ )ಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.

ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607, ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago