Categories: ರಾಜ್ಯ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ- ‘ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ’- ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2ಸಾವಿರ‌ ರೂ. ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago