Categories: ರಾಜ್ಯ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ- ‘ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ’- ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2ಸಾವಿರ‌ ರೂ. ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago