ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2ಸಾವಿರ ರೂ. ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…