ದೊಡ್ಡಬಳ್ಳಾಪುರ: ಮಾಹಿತಿ ನೀಡದೇ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಸೇರಿ ಹಲವು ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ದಂಡವನ್ನು ವಿಧಿಸಿ ಬಿಸಿ ಮುಟ್ಟಿಸಿದೆ.
ನಿಗದಿತ ಕಾಲಾವಧಿಯಲ್ಲಿ ಮಾಹಿತಿ ನೀಡುವ ನಿಯಮವನ್ನು ಗಾಳಿಗೆ ತೂರಿ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ ದುರ್ಗಾಶ್ರೀ, ಮತ್ತು ದೇವನಹಳ್ಳಿ ತಹಶಿಲ್ದಾರರಿಗೆ ರಾಜ್ಯ ಮಾಹಿತಿ ಆಯೋಗವು ದಂಡ ಹಾಕಿದೆ.
ಪ್ರಕರಣವೊಂದರ ಸಂಬಂಧ ಕಾಲ ಮಿತಿಯೊಳಗೆ ಮಾಹಿತಿ ನೀಡದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿ, ಕೆ ಆರ್ ಪುರಂ, ದೇವನಹಳ್ಳಿ ತಹಶೀಲ್ದಾರ್ ಗಳಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ.
ಬೆಂಗಳೂರು ದಕ್ಷಿಣ AC ವಿಶ್ವನಾಥ್ ಅವರಿಗೆ 25,000 ರೂ. ದಂಡ ವಿಧಿಸಿದ್ದು, ಕೆ ಆರ್ ಪುರಂ ತಹಶೀಲ್ದಾರ್ ರಾಜುಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.
ಅಂತೆಯೇ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ ದುರ್ಗಾಶ್ರೀ ಅವರಿಗೆ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಮಾಹಿತಿ ನೀಡದೇ, ಮತ್ತೊಂದರ ವಿಚಾರಣೆಗೆ ಸತತ ಹಾಜರಾಗದ ಕಾರಣ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ.
ಮುಂದೆಯೂ ಯಾವುದೇ ಪ್ರಕರಣದಲ್ಲಿ ಸೂಕ್ತ ಸಮಯಕ್ಕೆ ಕೇಳಿದ ಮಾಹಿತಿ ನೀಡಬೇಕು. ಉನ್ನತ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಮಾಹಿತಿ ಆಯೋಗ ರವಾನಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…