ಮಾಹಿತಿ ನೀಡದೇ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ: ದೊಡ್ಡಬಳ್ಳಾಪುರ ಎಸಿಗೆ ದಂಡ‌ ವಿಧಿಸಿದ ರಾಜ್ಯ ಮಾಹಿತಿ ಹಕ್ಕು ಆಯೋಗ

ದೊಡ್ಡಬಳ್ಳಾಪುರ: ಮಾಹಿತಿ ನೀಡದೇ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಸೇರಿ ಹಲವು ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ದಂಡವನ್ನು ವಿಧಿಸಿ ಬಿಸಿ ಮುಟ್ಟಿಸಿದೆ.

ನಿಗದಿತ ಕಾಲಾವಧಿಯಲ್ಲಿ ಮಾಹಿತಿ ನೀಡುವ ನಿಯಮವನ್ನು ಗಾಳಿಗೆ ತೂರಿ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ ದುರ್ಗಾಶ್ರೀ, ಮತ್ತು ದೇವನಹಳ್ಳಿ ತಹಶಿಲ್ದಾರರಿಗೆ ರಾಜ್ಯ ಮಾಹಿತಿ ಆಯೋಗವು ದಂಡ ಹಾಕಿದೆ.

ಪ್ರಕರಣವೊಂದರ ಸಂಬಂಧ ಕಾಲ ಮಿತಿಯೊಳಗೆ ಮಾಹಿತಿ ನೀಡದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿ, ಕೆ ಆರ್ ಪುರಂ, ದೇವನಹಳ್ಳಿ ತಹಶೀಲ್ದಾರ್ ಗಳಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ.

ಬೆಂಗಳೂರು ದಕ್ಷಿಣ AC ವಿಶ್ವನಾಥ್ ಅವರಿಗೆ 25,000 ರೂ. ದಂಡ ವಿಧಿಸಿದ್ದು, ಕೆ ಆರ್ ಪುರಂ ತಹಶೀಲ್ದಾ‌ರ್ ರಾಜುಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ಉಪವಿಭಾಧಿಕಾರಿ ದುರ್ಗಾಶ್ರೀ ಅವರಿಗೆ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಮಾಹಿತಿ ನೀಡದೇ, ಮತ್ತೊಂದರ ವಿಚಾರಣೆಗೆ ಸತತ ಹಾಜರಾಗದ ಕಾರಣ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಮುಂದೆಯೂ ಯಾವುದೇ ಪ್ರಕರಣದಲ್ಲಿ ಸೂಕ್ತ ಸಮಯಕ್ಕೆ ಕೇಳಿದ ಮಾಹಿತಿ ನೀಡಬೇಕು. ಉನ್ನತ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಮಾಹಿತಿ ಆಯೋಗ ರವಾನಿಸಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago