Categories: ಕೋಲಾರ

ಮಾಹಿತಿ ಹಕ್ಕುಗಳ ಬಗ್ಗೆ ಅರಿವು ಅತ್ಯವಶ್ಯಕವಾಗಿದೆ- ಹೇಮಂತ್ ನಾಗರಾಜ್

ಕೋಲಾರ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯ ಅಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾ ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಮಾಹಿತಿ ಪಡೆಯುವುದು ಕೂಡ ಪ್ರತಿಯೊಬ್ಬರ ಹಕ್ಕಾಗಿದೆ ಎಂದರು.

ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ 2005ರಲ್ಲಿ ಆರ್‌ಟಿಐ ಕಾಯ್ದೆಯನ್ನು ಜಾರಿ ಗೊಳಿಸಲಾಗಿದೆ ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪದ್ದಾಗಿದೆ ಸರ್ಕಾರವನ್ನು ಮತ್ತು ಅಧಿಕಾರಿಗಳನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಜೊತೆಗೆ ಮಾಹಿತಿ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರು ಮಾತನಾಡಿ ಮಾಹಿತಿ ಹಕ್ಕು ಅರ್ಜಿದಾರರು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದೇ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಹಿತಿ ಕೇಳಬೇಕು ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ನಿರ್ಲಕ್ಷ್ಯ ವಹಿಸಬಾರದು ಕೆಲವು ಸಂದರ್ಭದಲ್ಲಿ ಭಯದ ವಾತಾವರಣವು ಸೃಷ್ಟಿಯಾಗುತ್ತದೆ ಇದಕ್ಕೆ ಸಂಘಟಿತವಾದ ಹೋರಾಟವು ಮುಖ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೇದಿಕೆಯ ಜಿಲ್ಲಾ ಅಧ್ಯಕ್ಷ ಸಿ.ಮೋಹನ್ ಕುಮಾರ್ ಮಾಹಿತಿ ಹಕ್ಕು ನಿಯಮಗಳನ್ನು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕವಾಗಿದೆ ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಮಾಹಿತಿ ಪಡೆದು ಅಧಿಕಾರಿಗಳ ಮೇಲೆ ಕಾನೂನು ಕ್ರಮಗಳನ್ನು ಜಾರಿ ಮಾಡಿದ ಉದಾಹರಣೆಗಳು ಇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಹಕ ಹಕ್ಕುಗಳ ಮತ್ತು ಮಾಹಿತಿ ತಜ್ಞ ವೈ.ಜಿ ಮುರಳೀಧರನ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸಿ.ಕೆ ರವೀಂದ್ರನಾಥ್, ತಾಪಂ ಮಾಜಿ ಅಧ್ಯಕ್ಷ ಅಂಜಿನಪ್ಪ, ವೇದಿಕೆಯ ಮುಖಂಡರಾದ ವಿನೋದ ಕುಮಾರ್, ಪದ್ಮ, ರಮೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

45 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

6 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

7 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago