Categories: ಕೋಲಾರ

ಮಾಹಿತಿ ಹಕ್ಕುಗಳ ಬಗ್ಗೆ ಅರಿವು ಅತ್ಯವಶ್ಯಕವಾಗಿದೆ- ಹೇಮಂತ್ ನಾಗರಾಜ್

ಕೋಲಾರ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯ ಅಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾ ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಮಾಹಿತಿ ಪಡೆಯುವುದು ಕೂಡ ಪ್ರತಿಯೊಬ್ಬರ ಹಕ್ಕಾಗಿದೆ ಎಂದರು.

ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ 2005ರಲ್ಲಿ ಆರ್‌ಟಿಐ ಕಾಯ್ದೆಯನ್ನು ಜಾರಿ ಗೊಳಿಸಲಾಗಿದೆ ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪದ್ದಾಗಿದೆ ಸರ್ಕಾರವನ್ನು ಮತ್ತು ಅಧಿಕಾರಿಗಳನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಜೊತೆಗೆ ಮಾಹಿತಿ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರು ಮಾತನಾಡಿ ಮಾಹಿತಿ ಹಕ್ಕು ಅರ್ಜಿದಾರರು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದೇ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಹಿತಿ ಕೇಳಬೇಕು ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ನಿರ್ಲಕ್ಷ್ಯ ವಹಿಸಬಾರದು ಕೆಲವು ಸಂದರ್ಭದಲ್ಲಿ ಭಯದ ವಾತಾವರಣವು ಸೃಷ್ಟಿಯಾಗುತ್ತದೆ ಇದಕ್ಕೆ ಸಂಘಟಿತವಾದ ಹೋರಾಟವು ಮುಖ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೇದಿಕೆಯ ಜಿಲ್ಲಾ ಅಧ್ಯಕ್ಷ ಸಿ.ಮೋಹನ್ ಕುಮಾರ್ ಮಾಹಿತಿ ಹಕ್ಕು ನಿಯಮಗಳನ್ನು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕವಾಗಿದೆ ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಮಾಹಿತಿ ಪಡೆದು ಅಧಿಕಾರಿಗಳ ಮೇಲೆ ಕಾನೂನು ಕ್ರಮಗಳನ್ನು ಜಾರಿ ಮಾಡಿದ ಉದಾಹರಣೆಗಳು ಇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಹಕ ಹಕ್ಕುಗಳ ಮತ್ತು ಮಾಹಿತಿ ತಜ್ಞ ವೈ.ಜಿ ಮುರಳೀಧರನ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸಿ.ಕೆ ರವೀಂದ್ರನಾಥ್, ತಾಪಂ ಮಾಜಿ ಅಧ್ಯಕ್ಷ ಅಂಜಿನಪ್ಪ, ವೇದಿಕೆಯ ಮುಖಂಡರಾದ ವಿನೋದ ಕುಮಾರ್, ಪದ್ಮ, ರಮೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago