Categories: ಕೋಲಾರ

ಮಾಹಿತಿ ಹಕ್ಕುಗಳ ಬಗ್ಗೆ ಅರಿವು ಅತ್ಯವಶ್ಯಕವಾಗಿದೆ- ಹೇಮಂತ್ ನಾಗರಾಜ್

ಕೋಲಾರ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯ ಅಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾ ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಮಾಹಿತಿ ಪಡೆಯುವುದು ಕೂಡ ಪ್ರತಿಯೊಬ್ಬರ ಹಕ್ಕಾಗಿದೆ ಎಂದರು.

ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ 2005ರಲ್ಲಿ ಆರ್‌ಟಿಐ ಕಾಯ್ದೆಯನ್ನು ಜಾರಿ ಗೊಳಿಸಲಾಗಿದೆ ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪದ್ದಾಗಿದೆ ಸರ್ಕಾರವನ್ನು ಮತ್ತು ಅಧಿಕಾರಿಗಳನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಜೊತೆಗೆ ಮಾಹಿತಿ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರು ಮಾತನಾಡಿ ಮಾಹಿತಿ ಹಕ್ಕು ಅರ್ಜಿದಾರರು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದೇ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಹಿತಿ ಕೇಳಬೇಕು ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ನಿರ್ಲಕ್ಷ್ಯ ವಹಿಸಬಾರದು ಕೆಲವು ಸಂದರ್ಭದಲ್ಲಿ ಭಯದ ವಾತಾವರಣವು ಸೃಷ್ಟಿಯಾಗುತ್ತದೆ ಇದಕ್ಕೆ ಸಂಘಟಿತವಾದ ಹೋರಾಟವು ಮುಖ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೇದಿಕೆಯ ಜಿಲ್ಲಾ ಅಧ್ಯಕ್ಷ ಸಿ.ಮೋಹನ್ ಕುಮಾರ್ ಮಾಹಿತಿ ಹಕ್ಕು ನಿಯಮಗಳನ್ನು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕವಾಗಿದೆ ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಮಾಹಿತಿ ಪಡೆದು ಅಧಿಕಾರಿಗಳ ಮೇಲೆ ಕಾನೂನು ಕ್ರಮಗಳನ್ನು ಜಾರಿ ಮಾಡಿದ ಉದಾಹರಣೆಗಳು ಇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಹಕ ಹಕ್ಕುಗಳ ಮತ್ತು ಮಾಹಿತಿ ತಜ್ಞ ವೈ.ಜಿ ಮುರಳೀಧರನ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸಿ.ಕೆ ರವೀಂದ್ರನಾಥ್, ತಾಪಂ ಮಾಜಿ ಅಧ್ಯಕ್ಷ ಅಂಜಿನಪ್ಪ, ವೇದಿಕೆಯ ಮುಖಂಡರಾದ ವಿನೋದ ಕುಮಾರ್, ಪದ್ಮ, ರಮೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

8 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago