Categories: ಕೋಲಾರ

ಮಾಹಿತಿ ಹಕ್ಕುಗಳ ಬಗ್ಗೆ ಅರಿವು ಅತ್ಯವಶ್ಯಕವಾಗಿದೆ- ಹೇಮಂತ್ ನಾಗರಾಜ್

ಕೋಲಾರ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯ ಅಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾ ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಮಾಹಿತಿ ಪಡೆಯುವುದು ಕೂಡ ಪ್ರತಿಯೊಬ್ಬರ ಹಕ್ಕಾಗಿದೆ ಎಂದರು.

ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ 2005ರಲ್ಲಿ ಆರ್‌ಟಿಐ ಕಾಯ್ದೆಯನ್ನು ಜಾರಿ ಗೊಳಿಸಲಾಗಿದೆ ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪದ್ದಾಗಿದೆ ಸರ್ಕಾರವನ್ನು ಮತ್ತು ಅಧಿಕಾರಿಗಳನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಜೊತೆಗೆ ಮಾಹಿತಿ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರು ಮಾತನಾಡಿ ಮಾಹಿತಿ ಹಕ್ಕು ಅರ್ಜಿದಾರರು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದೇ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಹಿತಿ ಕೇಳಬೇಕು ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ನಿರ್ಲಕ್ಷ್ಯ ವಹಿಸಬಾರದು ಕೆಲವು ಸಂದರ್ಭದಲ್ಲಿ ಭಯದ ವಾತಾವರಣವು ಸೃಷ್ಟಿಯಾಗುತ್ತದೆ ಇದಕ್ಕೆ ಸಂಘಟಿತವಾದ ಹೋರಾಟವು ಮುಖ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೇದಿಕೆಯ ಜಿಲ್ಲಾ ಅಧ್ಯಕ್ಷ ಸಿ.ಮೋಹನ್ ಕುಮಾರ್ ಮಾಹಿತಿ ಹಕ್ಕು ನಿಯಮಗಳನ್ನು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕವಾಗಿದೆ ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಮಾಹಿತಿ ಪಡೆದು ಅಧಿಕಾರಿಗಳ ಮೇಲೆ ಕಾನೂನು ಕ್ರಮಗಳನ್ನು ಜಾರಿ ಮಾಡಿದ ಉದಾಹರಣೆಗಳು ಇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಹಕ ಹಕ್ಕುಗಳ ಮತ್ತು ಮಾಹಿತಿ ತಜ್ಞ ವೈ.ಜಿ ಮುರಳೀಧರನ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸಿ.ಕೆ ರವೀಂದ್ರನಾಥ್, ತಾಪಂ ಮಾಜಿ ಅಧ್ಯಕ್ಷ ಅಂಜಿನಪ್ಪ, ವೇದಿಕೆಯ ಮುಖಂಡರಾದ ವಿನೋದ ಕುಮಾರ್, ಪದ್ಮ, ರಮೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

6 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

8 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

13 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago