ಮಾ.03 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರ ವರೆಗೆ 2024ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 0-5 ವರ್ಷದೊಳಗಿನ 1,00,105 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಇದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 476 ಪೋಲಿಯೋ ಬೂತ್‌ಗಳನ್ನು ಹಾಗೂ 135 ಟ್ರಾನ್ಸಿಟ್ ತಂಡಗಳನ್ನು ರಚಿಸಲಾಗಿರುತ್ತದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1498 ಸೂಕ್ಷ್ಮ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಲಾಗಿದೆ.

ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್‌ಗಳಲ್ಲಿ ಹಾಗೂ ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.

ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಿ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

22 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago