ಮಾ.04 ಕ್ಕೆ ಹೊಸಕೋಟೆಯಲ್ಲಿ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ ಕಾರ್ಯಕ್ರಮವನ್ನು ಮಾರ್ಚ್ 04 ರಂದು ಹೊಸಕೋಟೆ ನಗರದಲ್ಲಿರುವ ಶ್ರೀ ಬಿ.ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧಾ ಅವರು ತಿಳಿಸಿದ್ದಾರೆ.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಆಹಾರ, ನಾಗರಿಕ ಸರಬರಾಬು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರ ಸಮಕ್ಷಮದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸುಮಾರು 3,100 ದರಖಾಸ್ತು ಪೋಡಿ, 10,200 ಪೌತಿ ಖಾತೆ ಹಾಗೂ 1,700 ಸಮಾಜಿಕ ಭದ್ರತೆಯ ಅಭಿಯಾನದಡಿಯಲ್ಲಿ ಒಟ್ಟು 15,000 ಕಂದಾಯ ಸೇವೆಗಳ ದಾಖಲೆಗಳ ವಿತರಿಸಲಾಗುವುದು.

ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ದಿನದಂದು ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರು, ಪೌರ ಕಾರ್ಮಿಕರು ಮತ್ತು ಗ್ರಾಮ ಪಂಚಾಯತಿ ಹಂತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಗಾರರಿಗೆ ಮತ್ತು ಅವರ ಕುಟುಂಬದರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ತಿನ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪುಧಾನ ಕಾರ್ಯದರ್ಶಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕಂದಾಯ ಆಯುಕ್ತರು, ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ ಹಾಗೂ ಇನ್ನಿತರ ಅಧಿಕಾರಿಗಳು ಮತ್ತು ವಿವಿಧ ಕಂದಾಯ ಸೇವೆಗಳ ಫಲಾನುಭವಿಗಳು ಸುಮಾರು 8,000 ರಿಂದ 10,000 ಕ್ಕಿಂತ ಹೆಚ್ಚಿನ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!