ಮಾ.1ರಂದು ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಬ್ರಹ್ಮರಥೋತ್ಸವದ ಅಂಗವಾಗಿ ಫೆಬ್ರವರಿ 28 ರಿಂದ ಮಾರ್ಚ್ 07ರವರೆಗೆ 7 ದಿನಗಳ ಕಾಲ, ವಿಶೇಷ ಪೂಜಾ ಕಾರ್ಯಕ್ರಮಗಳು, ನಾಟಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಲ ಭಕ್ತಾದಿಗಳಿಗೂ ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪೌರಾಣಿಕ ನಾಟಕ, ಉತ್ಸವ, ಕೀಲು ಕುದುರೆ, ಸಂಗೀತ ಸಂಜೆ, ತಮಟೆ ವಾದನೆ, ಕರಡಿ ಕುಣಿತ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ವಿವಿಧ ಧಾರ್ಮಿಕ ಕಾರ್ಯಕ್ರಮ, ಹಾಗೂ ಮಾರಸಂದ್ರ, ಬಂಡಯ್ಯನ ಪಾಳ್ಯ, ಮಧುರೆ, ಕೋಡಿಹಳ್ಳಿ, ಕನಸವಾಡಿ ಕಾಲೋನಿ ಗ್ರಾಮಗಳಲ್ಲಿ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು.

ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.

ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

6 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

10 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

11 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

16 hours ago