ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.
ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…