ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.
ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…