ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.
ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…