ಮಾ.1ರಂದು ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಬ್ರಹ್ಮರಥೋತ್ಸವದ ಅಂಗವಾಗಿ ಫೆಬ್ರವರಿ 28 ರಿಂದ ಮಾರ್ಚ್ 07ರವರೆಗೆ 7 ದಿನಗಳ ಕಾಲ, ವಿಶೇಷ ಪೂಜಾ ಕಾರ್ಯಕ್ರಮಗಳು, ನಾಟಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಲ ಭಕ್ತಾದಿಗಳಿಗೂ ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪೌರಾಣಿಕ ನಾಟಕ, ಉತ್ಸವ, ಕೀಲು ಕುದುರೆ, ಸಂಗೀತ ಸಂಜೆ, ತಮಟೆ ವಾದನೆ, ಕರಡಿ ಕುಣಿತ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ವಿವಿಧ ಧಾರ್ಮಿಕ ಕಾರ್ಯಕ್ರಮ, ಹಾಗೂ ಮಾರಸಂದ್ರ, ಬಂಡಯ್ಯನ ಪಾಳ್ಯ, ಮಧುರೆ, ಕೋಡಿಹಳ್ಳಿ, ಕನಸವಾಡಿ ಕಾಲೋನಿ ಗ್ರಾಮಗಳಲ್ಲಿ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು.

ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.

ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

13 minutes ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

13 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

14 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

14 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

14 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

16 hours ago