ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.
ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…