ಮಾ.1ರಂದು ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಬ್ರಹ್ಮರಥೋತ್ಸವದ ಅಂಗವಾಗಿ ಫೆಬ್ರವರಿ 28 ರಿಂದ ಮಾರ್ಚ್ 07ರವರೆಗೆ 7 ದಿನಗಳ ಕಾಲ, ವಿಶೇಷ ಪೂಜಾ ಕಾರ್ಯಕ್ರಮಗಳು, ನಾಟಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಲ ಭಕ್ತಾದಿಗಳಿಗೂ ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪೌರಾಣಿಕ ನಾಟಕ, ಉತ್ಸವ, ಕೀಲು ಕುದುರೆ, ಸಂಗೀತ ಸಂಜೆ, ತಮಟೆ ವಾದನೆ, ಕರಡಿ ಕುಣಿತ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ವಿವಿಧ ಧಾರ್ಮಿಕ ಕಾರ್ಯಕ್ರಮ, ಹಾಗೂ ಮಾರಸಂದ್ರ, ಬಂಡಯ್ಯನ ಪಾಳ್ಯ, ಮಧುರೆ, ಕೋಡಿಹಳ್ಳಿ, ಕನಸವಾಡಿ ಕಾಲೋನಿ ಗ್ರಾಮಗಳಲ್ಲಿ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು.

ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.

ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago