ಮಾ.1ರಂದು ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ 68ನೇ ಅದ್ಧೂರಿ ಬ್ರಹ್ಮರಥೋತ್ಸವ ಮಾರ್ಚ್ 1 ರಂದು ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವಾಲಯದ ಧರ್ಮಾಕಾರಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ರಥೋತ್ಸವ ಆಚರಣೆ ಕಳೆಗುಂದಿತ್ತು. ಆದರೆ ಈಗ ಕೋವಿಡ್ ಆತಂಕ ದೂರವಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು, ಭಕ್ತರ ಒತ್ತಾಯದಂತೆ 68ನೇ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಬ್ರಹ್ಮರಥೋತ್ಸವದ ಅಂಗವಾಗಿ ಫೆಬ್ರವರಿ 28 ರಿಂದ ಮಾರ್ಚ್ 07ರವರೆಗೆ 7 ದಿನಗಳ ಕಾಲ, ವಿಶೇಷ ಪೂಜಾ ಕಾರ್ಯಕ್ರಮಗಳು, ನಾಟಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಲ ಭಕ್ತಾದಿಗಳಿಗೂ ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪೌರಾಣಿಕ ನಾಟಕ, ಉತ್ಸವ, ಕೀಲು ಕುದುರೆ, ಸಂಗೀತ ಸಂಜೆ, ತಮಟೆ ವಾದನೆ, ಕರಡಿ ಕುಣಿತ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ವಿವಿಧ ಧಾರ್ಮಿಕ ಕಾರ್ಯಕ್ರಮ, ಹಾಗೂ ಮಾರಸಂದ್ರ, ಬಂಡಯ್ಯನ ಪಾಳ್ಯ, ಮಧುರೆ, ಕೋಡಿಹಳ್ಳಿ, ಕನಸವಾಡಿ ಕಾಲೋನಿ ಗ್ರಾಮಗಳಲ್ಲಿ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು.

ಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 1ರ ಮಧ್ಯಾಹ್ನ 1-35 ರಿಂದ 2-15ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.28ರಂದು ಸಂಜೆ 6 ಗಂಟೆಯ ನಂತರ ಗಣಪತಿ ಪ್ರಾರ್ಥನೆ, ಪುಣ್ಯಾಹ, ರಕ್ಷಾ ಬಂಧನ, ಧ್ವಜಾರೋಹಣ, ವಾಸ್ತು ಹೋಮ, ಕಳಸ ಸ್ಥಾಪನೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 9-30ಕ್ಕೆ ಕೊಟ್ಟಿಗೆಪಾಳ್ಯ ಶ್ರೀ ಮಹಾಮುನೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ರಾಜ ವಿಕ್ರಮ ಪೌರಾಣಿಕ ನಾಟಕ ನಡೆಯಲಿದೆ.

ಮಾ.01ರಂದು ಬೆಳಗ್ಗೆ 08 ಗಂಟೆಯಿಂದ ಕಲಶಾರ್ಚನೆ, ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಮಧ್ಯಾಹ್ನ 1-35 ರಿಂದ ಬ್ರಹ್ಮರಥೋತ್ಸವ, ಸಂಜೆ 6ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಯ ನಂತರ ಧೂಳೋತ್ಸವ, ಪಲ್ಲಕಿ ಉತ್ಸವ, ಸಂಗೀತ ಸಂಜೆ, ರಾತ್ರಿ 9-30ಕ್ಕೆ ಚೆನ್ನಾದೇವಿ ಅಗ್ರಹಾರದ ಶ್ರೀ ವಿನಾಯಕ ಗೆಳೆಯರ ಬಳಗ ನಾಟಕ ಮಂಡಳಿಯಿಂದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ನಡೆಯಲಿದೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

19 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

22 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago