ಮಾ.14ರಿಂದ ಮೇಲಿನಜೂಗಾನಹಳ್ಳಿಯಲ್ಲಿ “ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್”

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ ದಿವಂಗತ ಡಾ.ಪುನಿತ್ ರಾಜ್‌ಕುಮಾರ್‌ರವರ ಸವಿನೆನಪಿಗಾಗಿ ತಾಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಮಾ.14ರ ಶುಕ್ರವಾರದಿಂದ ಮಾ.16ರ ಭಾನುವಾರದವರೆಗೆ “ಟೆನ್ನಿಸ್ (ವಿಕ್ಕಿ) ಬಾಲ್ ಕ್ರಿಕೆಟ್ ಟೂರ್ನಿಮೆಂಟ್” ನ್ನು ಆಯೋಜನೆ ಮಾಡಲಾಗಿದೆ.

ಮೂರು ದಿನಗಳ ಕಾಲ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೇಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ಮಾ.12ರ ಬುಧವಾರದಂದು ಸಂಜೆ 6 ಗಂಟೆಯೊಳಗೆ ನೊಂದಾಯಿಸಿಕೊಳ್ಳತಕ್ಕದ್ದು.

ಬಹುಮಾನ ಹಾಗೂ ಪ್ರವೇಶ ಶುಲ್ಕ ವಿವರ

ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ ಹಾಗೂ ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ ಇರುತ್ತದೆ. ಪ್ರವೇಶ ಶುಲ್ಕ 1999 ನಿಗದಿ ಮಾಡಲಾಗಿದೆ.

ನಿಬಂಧನೆಗಳು : ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್‌ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ). ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಅನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈ ಬಿಡಲಾಗುವುದು. ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್‌ಗಳಿಗೆ ಸೀಮಿತವಾಗಿರುತ್ತದೆ. ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ. ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್‌ವರ್ ನೀಡಲಾಗುವುದು. ಪ್ರತಿ ದಿನ ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ. ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ. ಪ್ರತಿ ಆಟಗಾರರು ಆಧಾರ್ ಕಾರ್ಡ್‌ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವದು). ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್‌ ಆಟಗಾರರು ಮಾತ್ರ ಆಡಬೇಕು.

ಹೆಚ್ಚಿನ‌ ಮಾಹಿತಿಗಾಗಿ ಗೋಪಾಲಕೃಷ್ಣ : 9686326887, ಸುನಿಲ್ : 6361591407, ಸುರೇಶ್ : 9110487161, ಮುನಿರಾಜು : 8884978979, ಮುತ್ತರಾಜು : 9066333374, ರಾಜು : 7486949414 ಇವರನ್ನು ಸಂಪರ್ಕಿಸಿ

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

23 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

6 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago