ಮಾ.14ರಿಂದ ಮೇಲಿನಜೂಗಾನಹಳ್ಳಿಯಲ್ಲಿ “ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್”

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ ದಿವಂಗತ ಡಾ.ಪುನಿತ್ ರಾಜ್‌ಕುಮಾರ್‌ರವರ ಸವಿನೆನಪಿಗಾಗಿ ತಾಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಮಾ.14ರ ಶುಕ್ರವಾರದಿಂದ ಮಾ.16ರ ಭಾನುವಾರದವರೆಗೆ “ಟೆನ್ನಿಸ್ (ವಿಕ್ಕಿ) ಬಾಲ್ ಕ್ರಿಕೆಟ್ ಟೂರ್ನಿಮೆಂಟ್” ನ್ನು ಆಯೋಜನೆ ಮಾಡಲಾಗಿದೆ.

ಮೂರು ದಿನಗಳ ಕಾಲ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೇಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ಮಾ.12ರ ಬುಧವಾರದಂದು ಸಂಜೆ 6 ಗಂಟೆಯೊಳಗೆ ನೊಂದಾಯಿಸಿಕೊಳ್ಳತಕ್ಕದ್ದು.

ಬಹುಮಾನ ಹಾಗೂ ಪ್ರವೇಶ ಶುಲ್ಕ ವಿವರ

ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ ಹಾಗೂ ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ ಇರುತ್ತದೆ. ಪ್ರವೇಶ ಶುಲ್ಕ 1999 ನಿಗದಿ ಮಾಡಲಾಗಿದೆ.

ನಿಬಂಧನೆಗಳು : ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್‌ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ). ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಅನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈ ಬಿಡಲಾಗುವುದು. ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್‌ಗಳಿಗೆ ಸೀಮಿತವಾಗಿರುತ್ತದೆ. ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ. ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್‌ವರ್ ನೀಡಲಾಗುವುದು. ಪ್ರತಿ ದಿನ ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ. ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ. ಪ್ರತಿ ಆಟಗಾರರು ಆಧಾರ್ ಕಾರ್ಡ್‌ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವದು). ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್‌ ಆಟಗಾರರು ಮಾತ್ರ ಆಡಬೇಕು.

ಹೆಚ್ಚಿನ‌ ಮಾಹಿತಿಗಾಗಿ ಗೋಪಾಲಕೃಷ್ಣ : 9686326887, ಸುನಿಲ್ : 6361591407, ಸುರೇಶ್ : 9110487161, ಮುನಿರಾಜು : 8884978979, ಮುತ್ತರಾಜು : 9066333374, ರಾಜು : 7486949414 ಇವರನ್ನು ಸಂಪರ್ಕಿಸಿ

Ramesh Babu

Journalist

Recent Posts

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 minute ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

1 hour ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

13 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

14 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

15 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

15 hours ago