ಮಾ.14ರಿಂದ ಮೇಲಿನಜೂಗಾನಹಳ್ಳಿಯಲ್ಲಿ “ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್”

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ ದಿವಂಗತ ಡಾ.ಪುನಿತ್ ರಾಜ್‌ಕುಮಾರ್‌ರವರ ಸವಿನೆನಪಿಗಾಗಿ ತಾಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಮಾ.14ರ ಶುಕ್ರವಾರದಿಂದ ಮಾ.16ರ ಭಾನುವಾರದವರೆಗೆ “ಟೆನ್ನಿಸ್ (ವಿಕ್ಕಿ) ಬಾಲ್ ಕ್ರಿಕೆಟ್ ಟೂರ್ನಿಮೆಂಟ್” ನ್ನು ಆಯೋಜನೆ ಮಾಡಲಾಗಿದೆ.

ಮೂರು ದಿನಗಳ ಕಾಲ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೇಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ಮಾ.12ರ ಬುಧವಾರದಂದು ಸಂಜೆ 6 ಗಂಟೆಯೊಳಗೆ ನೊಂದಾಯಿಸಿಕೊಳ್ಳತಕ್ಕದ್ದು.

ಬಹುಮಾನ ಹಾಗೂ ಪ್ರವೇಶ ಶುಲ್ಕ ವಿವರ

ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ ಹಾಗೂ ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ ಇರುತ್ತದೆ. ಪ್ರವೇಶ ಶುಲ್ಕ 1999 ನಿಗದಿ ಮಾಡಲಾಗಿದೆ.

ನಿಬಂಧನೆಗಳು : ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್‌ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ). ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಅನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈ ಬಿಡಲಾಗುವುದು. ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್‌ಗಳಿಗೆ ಸೀಮಿತವಾಗಿರುತ್ತದೆ. ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ. ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್‌ವರ್ ನೀಡಲಾಗುವುದು. ಪ್ರತಿ ದಿನ ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ. ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ. ಪ್ರತಿ ಆಟಗಾರರು ಆಧಾರ್ ಕಾರ್ಡ್‌ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವದು). ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್‌ ಆಟಗಾರರು ಮಾತ್ರ ಆಡಬೇಕು.

ಹೆಚ್ಚಿನ‌ ಮಾಹಿತಿಗಾಗಿ ಗೋಪಾಲಕೃಷ್ಣ : 9686326887, ಸುನಿಲ್ : 6361591407, ಸುರೇಶ್ : 9110487161, ಮುನಿರಾಜು : 8884978979, ಮುತ್ತರಾಜು : 9066333374, ರಾಜು : 7486949414 ಇವರನ್ನು ಸಂಪರ್ಕಿಸಿ

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

4 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

5 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

6 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

8 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

15 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

15 hours ago