ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ ದಿವಂಗತ ಡಾ.ಪುನಿತ್ ರಾಜ್ಕುಮಾರ್ರವರ ಸವಿನೆನಪಿಗಾಗಿ ತಾಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಮಾ.14ರ ಶುಕ್ರವಾರದಿಂದ ಮಾ.16ರ ಭಾನುವಾರದವರೆಗೆ “ಟೆನ್ನಿಸ್ (ವಿಕ್ಕಿ) ಬಾಲ್ ಕ್ರಿಕೆಟ್ ಟೂರ್ನಿಮೆಂಟ್” ನ್ನು ಆಯೋಜನೆ ಮಾಡಲಾಗಿದೆ.
ಮೂರು ದಿನಗಳ ಕಾಲ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೇಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ಮಾ.12ರ ಬುಧವಾರದಂದು ಸಂಜೆ 6 ಗಂಟೆಯೊಳಗೆ ನೊಂದಾಯಿಸಿಕೊಳ್ಳತಕ್ಕದ್ದು.
ಬಹುಮಾನ ಹಾಗೂ ಪ್ರವೇಶ ಶುಲ್ಕ ವಿವರ
ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ ಹಾಗೂ ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ ಇರುತ್ತದೆ. ಪ್ರವೇಶ ಶುಲ್ಕ 1999 ನಿಗದಿ ಮಾಡಲಾಗಿದೆ.
ನಿಬಂಧನೆಗಳು : ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ). ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಅನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈ ಬಿಡಲಾಗುವುದು. ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್ಗಳಿಗೆ ಸೀಮಿತವಾಗಿರುತ್ತದೆ. ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ. ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್ವರ್ ನೀಡಲಾಗುವುದು. ಪ್ರತಿ ದಿನ ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ. ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ. ಪ್ರತಿ ಆಟಗಾರರು ಆಧಾರ್ ಕಾರ್ಡ್ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವದು). ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್ ಆಟಗಾರರು ಮಾತ್ರ ಆಡಬೇಕು.
ಹೆಚ್ಚಿನ ಮಾಹಿತಿಗಾಗಿ ಗೋಪಾಲಕೃಷ್ಣ : 9686326887, ಸುನಿಲ್ : 6361591407, ಸುರೇಶ್ : 9110487161, ಮುನಿರಾಜು : 8884978979, ಮುತ್ತರಾಜು : 9066333374, ರಾಜು : 7486949414 ಇವರನ್ನು ಸಂಪರ್ಕಿಸಿ
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…