ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ ದಿವಂಗತ ಡಾ.ಪುನಿತ್ ರಾಜ್ಕುಮಾರ್ರವರ ಸವಿನೆನಪಿಗಾಗಿ ತಾಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಮಾ.14ರ ಶುಕ್ರವಾರದಿಂದ ಮಾ.16ರ ಭಾನುವಾರದವರೆಗೆ “ಟೆನ್ನಿಸ್ (ವಿಕ್ಕಿ) ಬಾಲ್ ಕ್ರಿಕೆಟ್ ಟೂರ್ನಿಮೆಂಟ್” ನ್ನು ಆಯೋಜನೆ ಮಾಡಲಾಗಿದೆ.
ಮೂರು ದಿನಗಳ ಕಾಲ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೇಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ಮಾ.12ರ ಬುಧವಾರದಂದು ಸಂಜೆ 6 ಗಂಟೆಯೊಳಗೆ ನೊಂದಾಯಿಸಿಕೊಳ್ಳತಕ್ಕದ್ದು.
ಬಹುಮಾನ ಹಾಗೂ ಪ್ರವೇಶ ಶುಲ್ಕ ವಿವರ
ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ ಹಾಗೂ ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ ಇರುತ್ತದೆ. ಪ್ರವೇಶ ಶುಲ್ಕ 1999 ನಿಗದಿ ಮಾಡಲಾಗಿದೆ.
ನಿಬಂಧನೆಗಳು : ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ). ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಅನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈ ಬಿಡಲಾಗುವುದು. ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್ಗಳಿಗೆ ಸೀಮಿತವಾಗಿರುತ್ತದೆ. ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ. ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್ವರ್ ನೀಡಲಾಗುವುದು. ಪ್ರತಿ ದಿನ ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ. ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ. ಪ್ರತಿ ಆಟಗಾರರು ಆಧಾರ್ ಕಾರ್ಡ್ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವದು). ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್ ಆಟಗಾರರು ಮಾತ್ರ ಆಡಬೇಕು.
ಹೆಚ್ಚಿನ ಮಾಹಿತಿಗಾಗಿ ಗೋಪಾಲಕೃಷ್ಣ : 9686326887, ಸುನಿಲ್ : 6361591407, ಸುರೇಶ್ : 9110487161, ಮುನಿರಾಜು : 8884978979, ಮುತ್ತರಾಜು : 9066333374, ರಾಜು : 7486949414 ಇವರನ್ನು ಸಂಪರ್ಕಿಸಿ
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…