ಮಾ.19ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ  ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ  ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.

ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.

ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ  ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.

ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ   ನೆರವೇರಲಿದೆ.

ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ  ಮಾಡಲಾಗಿದೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

11 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

13 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

14 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

20 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

20 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

23 hours ago