ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.
ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನೆರವೇರಲಿದೆ.
ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…