ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.
ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನೆರವೇರಲಿದೆ.
ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…