ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.
ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನೆರವೇರಲಿದೆ.
ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…