ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.
ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನೆರವೇರಲಿದೆ.
ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…