ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.
ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನೆರವೇರಲಿದೆ.
ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…