ಮಾ.22 ರಂದು ಕರ್ನಾಟಕ ಬಂದ್

ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಸಂಬಂಧ ಮಾರ್ಚ್​ 18ರಂದು ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್‌’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್​ ಮಾಡಲು ತೀರ್ಮಾನವಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಬಂದ್ ಆಗುವುದು ನಿಶ್ಚಿತ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಹೀಗಾಗಿ ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ ಸಾರ್ವಜನಿಕರಿಗೆ ಮನವಿ ಮಾಡಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅವತ್ತು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಅವತ್ತು ಬಸ್ ಓಡಿಸಬಾರದು.  ಬೆಳಗಾವಿಯಿಂದ ಎಂಇಎಸ್ ಅನ್ನು ಒದ್ದು ಓಡಿಸಬೇಕೋ ಬೇಡ್ವೋ? ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದ್ರೆ ನಮ್ ಕಣ್ಣಿಗೆ ಇದು ಬೆಟ್ಟ. ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಇದೆ. ಮಹಾರಾಷ್ಟ್ರದಲ್ಲಿ ನಮ್ಮ ಕನ್ನಡಿಗರ ಪ್ರತಿಮೆ ಇಲ್ಲ ಎಂದರು.

*ಬಂದ್​ಗೆ KSRTC, BMTC ನೌಕರರ ಸಂಘ ಬೆಂಬಲ*

ಮಾರ್ಚ್​ 22ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಸಾರಿಗೆ ನೌಕರರ ಕೂಟ ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್​​ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಆದ್ರೆ ಮೆಟ್ರೋ ಬಂದ್​ ಕುರಿತು ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಆದರೂ ಸಹ ಅಂದು ಏನಾದರೂ ಪ್ರಯಾಣ ಮಾಡುವ ಪ್ಲ್ಯಾನ್ ಇದ್ದರೆ ಯಾವುದಕ್ಕೂ ಮುಂದೂಡುವುದು ಒಳಿತು.

*ಬಂದ್​ಗೆ ಕರವೇ ಶಿವರಾಮೇಗೌಡ ಬಣ ಬೆಂಬಲ*

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್​ 22ರಂದು ಕರ್ನಾಟಕ ಬಂದ್​ಗೆ ಕನ್ನಡ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸಹ ಬೆಂಬಲಿಸಿದೆ. ಈ ಬಗ್ಗೆ ಸ್ವತಃ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಸ್ಪಷ್ಟಪಡಿಸಿದ್ದಾರೆ. ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ನಾಡಿನ ಹಿತಕ್ಕಾಗಿ ಬಂದ್​ಗೆ ಕರೆ ನೀಡಲಾಗಿದೆ. ಸರ್ವ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಬಂದ್​ಗೆ ಕರೆ ನೀಡಿದ್ದೇವೆ. ಮೆಟ್ರೋದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಆಗುತ್ತಿದೆ. ಶಿವಸೇನೆ ನಿಷೇಧ ಸೇರಿ ಅನೇಕ ವಿಚಾರ ಮುಂದಿಟ್ಟು ಬಂದ್​ಗೆ ಕರೆ ನೀಡಲಾಗಿದೆ. ಚಾಲಕರು ಸೇರಿ ಎಲ್ಲರೂ ಈ ಬಂದ್​ ಅನ್ನು ಯಶಸ್ವಿಗೊಳಿಸಬೇಕು. ಆಸ್ಪತ್ರೆ, ಹಾಲು ಸೇರಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಬಂದಿಗೆ ಯಾವ ರೀತಿಯ ಪ್ರತಿಕ್ರಿಯೆ ದೊರಕುವುದು ಎಂಬುದನ್ನು ಕಾದು ನೋಡಬೇಕಾಗಿದೆ.

Ramesh Babu

Journalist

Recent Posts

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

10 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

22 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 day ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 days ago