ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಸಂಬಂಧ ಮಾರ್ಚ್ 18ರಂದು ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಮಾಡಲು ತೀರ್ಮಾನವಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಬಂದ್ ಆಗುವುದು ನಿಶ್ಚಿತ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಹೀಗಾಗಿ ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ ಸಾರ್ವಜನಿಕರಿಗೆ ಮನವಿ ಮಾಡಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅವತ್ತು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಅವತ್ತು ಬಸ್ ಓಡಿಸಬಾರದು. ಬೆಳಗಾವಿಯಿಂದ ಎಂಇಎಸ್ ಅನ್ನು ಒದ್ದು ಓಡಿಸಬೇಕೋ ಬೇಡ್ವೋ? ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದ್ರೆ ನಮ್ ಕಣ್ಣಿಗೆ ಇದು ಬೆಟ್ಟ. ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಇದೆ. ಮಹಾರಾಷ್ಟ್ರದಲ್ಲಿ ನಮ್ಮ ಕನ್ನಡಿಗರ ಪ್ರತಿಮೆ ಇಲ್ಲ ಎಂದರು.
*ಬಂದ್ಗೆ KSRTC, BMTC ನೌಕರರ ಸಂಘ ಬೆಂಬಲ*
ಮಾರ್ಚ್ 22ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಸಾರಿಗೆ ನೌಕರರ ಕೂಟ ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಆದ್ರೆ ಮೆಟ್ರೋ ಬಂದ್ ಕುರಿತು ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಆದರೂ ಸಹ ಅಂದು ಏನಾದರೂ ಪ್ರಯಾಣ ಮಾಡುವ ಪ್ಲ್ಯಾನ್ ಇದ್ದರೆ ಯಾವುದಕ್ಕೂ ಮುಂದೂಡುವುದು ಒಳಿತು.
*ಬಂದ್ಗೆ ಕರವೇ ಶಿವರಾಮೇಗೌಡ ಬಣ ಬೆಂಬಲ*
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕನ್ನಡ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸಹ ಬೆಂಬಲಿಸಿದೆ. ಈ ಬಗ್ಗೆ ಸ್ವತಃ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಸ್ಪಷ್ಟಪಡಿಸಿದ್ದಾರೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್ಗೆ ಕರೆ ನೀಡಲಾಗಿದೆ. ನಾಡಿನ ಹಿತಕ್ಕಾಗಿ ಬಂದ್ಗೆ ಕರೆ ನೀಡಲಾಗಿದೆ. ಸರ್ವ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದೇವೆ. ಮೆಟ್ರೋದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಆಗುತ್ತಿದೆ. ಶಿವಸೇನೆ ನಿಷೇಧ ಸೇರಿ ಅನೇಕ ವಿಚಾರ ಮುಂದಿಟ್ಟು ಬಂದ್ಗೆ ಕರೆ ನೀಡಲಾಗಿದೆ. ಚಾಲಕರು ಸೇರಿ ಎಲ್ಲರೂ ಈ ಬಂದ್ ಅನ್ನು ಯಶಸ್ವಿಗೊಳಿಸಬೇಕು. ಆಸ್ಪತ್ರೆ, ಹಾಲು ಸೇರಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಬಂದಿಗೆ ಯಾವ ರೀತಿಯ ಪ್ರತಿಕ್ರಿಯೆ ದೊರಕುವುದು ಎಂಬುದನ್ನು ಕಾದು ನೋಡಬೇಕಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…