ಮಾ.22 ರಂದು ಕರ್ನಾಟಕ ಬಂದ್

ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಸಂಬಂಧ ಮಾರ್ಚ್​ 18ರಂದು ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್‌’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್​ ಮಾಡಲು ತೀರ್ಮಾನವಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಬಂದ್ ಆಗುವುದು ನಿಶ್ಚಿತ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಹೀಗಾಗಿ ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ ಸಾರ್ವಜನಿಕರಿಗೆ ಮನವಿ ಮಾಡಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅವತ್ತು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಅವತ್ತು ಬಸ್ ಓಡಿಸಬಾರದು.  ಬೆಳಗಾವಿಯಿಂದ ಎಂಇಎಸ್ ಅನ್ನು ಒದ್ದು ಓಡಿಸಬೇಕೋ ಬೇಡ್ವೋ? ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದ್ರೆ ನಮ್ ಕಣ್ಣಿಗೆ ಇದು ಬೆಟ್ಟ. ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಇದೆ. ಮಹಾರಾಷ್ಟ್ರದಲ್ಲಿ ನಮ್ಮ ಕನ್ನಡಿಗರ ಪ್ರತಿಮೆ ಇಲ್ಲ ಎಂದರು.

*ಬಂದ್​ಗೆ KSRTC, BMTC ನೌಕರರ ಸಂಘ ಬೆಂಬಲ*

ಮಾರ್ಚ್​ 22ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಸಾರಿಗೆ ನೌಕರರ ಕೂಟ ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್​​ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಆದ್ರೆ ಮೆಟ್ರೋ ಬಂದ್​ ಕುರಿತು ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಆದರೂ ಸಹ ಅಂದು ಏನಾದರೂ ಪ್ರಯಾಣ ಮಾಡುವ ಪ್ಲ್ಯಾನ್ ಇದ್ದರೆ ಯಾವುದಕ್ಕೂ ಮುಂದೂಡುವುದು ಒಳಿತು.

*ಬಂದ್​ಗೆ ಕರವೇ ಶಿವರಾಮೇಗೌಡ ಬಣ ಬೆಂಬಲ*

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್​ 22ರಂದು ಕರ್ನಾಟಕ ಬಂದ್​ಗೆ ಕನ್ನಡ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸಹ ಬೆಂಬಲಿಸಿದೆ. ಈ ಬಗ್ಗೆ ಸ್ವತಃ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಸ್ಪಷ್ಟಪಡಿಸಿದ್ದಾರೆ. ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ನಾಡಿನ ಹಿತಕ್ಕಾಗಿ ಬಂದ್​ಗೆ ಕರೆ ನೀಡಲಾಗಿದೆ. ಸರ್ವ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಬಂದ್​ಗೆ ಕರೆ ನೀಡಿದ್ದೇವೆ. ಮೆಟ್ರೋದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಆಗುತ್ತಿದೆ. ಶಿವಸೇನೆ ನಿಷೇಧ ಸೇರಿ ಅನೇಕ ವಿಚಾರ ಮುಂದಿಟ್ಟು ಬಂದ್​ಗೆ ಕರೆ ನೀಡಲಾಗಿದೆ. ಚಾಲಕರು ಸೇರಿ ಎಲ್ಲರೂ ಈ ಬಂದ್​ ಅನ್ನು ಯಶಸ್ವಿಗೊಳಿಸಬೇಕು. ಆಸ್ಪತ್ರೆ, ಹಾಲು ಸೇರಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಬಂದಿಗೆ ಯಾವ ರೀತಿಯ ಪ್ರತಿಕ್ರಿಯೆ ದೊರಕುವುದು ಎಂಬುದನ್ನು ಕಾದು ನೋಡಬೇಕಾಗಿದೆ.

Ramesh Babu

Journalist

Recent Posts

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

4 hours ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

8 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

10 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

12 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

14 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago