ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಶಿಧರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ನಮ್ಮ ವಿರೋಧವಿದೆ. ಈಗಾಗಲೇ ಸಾಕಷ್ಟು ಹೋರಾಟಗಳನ್ನು ಮಾಡಿದ್ದೇವೆ. ಮುಂದುವರಿದು ಮಾ.31 (ಮಂಗಳವಾರ) ರಂದು ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 100 ಟ್ಯಾಕ್ಟರ್ ಗಳು ಬರಲಿವೆ.. ಈ ಟ್ರ್ಯಾಕ್ಟರ್ ಛಲೋದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು ಎಂದರು..
ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…
ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಎಂದರು.
ಈಗಾಗಲೇ ಶಾಸಕ ಧೀರಜ್ ಮುನಿರಾಜದ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಸೇರಿದಂತೆ ಚನ್ನರಾಯಪಟ್ಟಣ ರೈತ ಹೋರಾಟಗಾರು, ವಿವಿಧ ಸಂಘಟನೆಗಳ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದರು..
ನಂತರ ರೈತ ಕೇಶವ ಕುಮಾರ್ ಮಾತನಾಡಿ, ನಾನು ವ್ಯವಸಾಯದಲ್ಲೇ ನನ್ನ ಜೀವನ ಕಟ್ಟಿಕೊಂಡಿದ್ದೇನೆ. ಸರ್ಕಾರವು ರೈತರಿಗೆ ಹಿಂಸೆ ನೀಡಿ ಬಲವಂತವಾಗಿ ಭೂಮಿ ಕಬಳಿಕೆ ಮಾಡಲು ಮುಂದಾಗಿದೆ.. ಬೇರೆ ದೇಶಗಳ ಕಂಪನಿಗಳಿಗೋಸ್ಕರ ನಮ್ಮ ಫಲವತ್ತಾದ ಜಮೀನು ಕಬಳಿಕೆ ಮಾಡಲಾಗುತ್ತಿದೆ.. ನಮ್ಮ ಊಟದ ತಟ್ಟೆಯನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ. ಎಲ್ಲೂ ಸಹ ಬಲವಂತವಾಗಿ ಭೂಮಿ ಕಸಿದುಕೊಳ್ಳಬಾರದು ಎಂದರು…
ಸುನೀಲ್ ಕುಮಾರ್, ತಿಮ್ಮೇಗೌಡ, ಪ್ರಭಾ, ರಾಮಕೃಷ್ಣಯ್ಯ, ಮನು, ಕೆಂಪೇಗೌಡ ಸೇರಿಂದರೆ ಸಮಿತಿ ಮುಖಂಡರು, ರೈತರು ಇದ್ದರು…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…