ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಶಿಧರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ನಮ್ಮ ವಿರೋಧವಿದೆ. ಈಗಾಗಲೇ ಸಾಕಷ್ಟು ಹೋರಾಟಗಳನ್ನು ಮಾಡಿದ್ದೇವೆ. ಮುಂದುವರಿದು ಮಾ.31 (ಮಂಗಳವಾರ) ರಂದು ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 100 ಟ್ಯಾಕ್ಟರ್ ಗಳು ಬರಲಿವೆ.. ಈ ಟ್ರ್ಯಾಕ್ಟರ್ ಛಲೋದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು ಎಂದರು..

ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಎಂದರು.

ಈಗಾಗಲೇ ಶಾಸಕ ಧೀರಜ್ ಮುನಿರಾಜದ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್‌ ಮುಖಂಡ ಬಿ.ಮುನೇಗೌಡ ಸೇರಿದಂತೆ ಚನ್ನರಾಯಪಟ್ಟಣ ರೈತ ಹೋರಾಟಗಾರು, ವಿವಿಧ ಸಂಘಟನೆಗಳ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದರು..

ನಂತರ ರೈತ ಕೇಶವ ಕುಮಾರ್ ಮಾತನಾಡಿ, ನಾನು ವ್ಯವಸಾಯದಲ್ಲೇ ನನ್ನ ಜೀವನ ಕಟ್ಟಿಕೊಂಡಿದ್ದೇನೆ. ಸರ್ಕಾರವು ರೈತರಿಗೆ ಹಿಂಸೆ ನೀಡಿ ಬಲವಂತವಾಗಿ ಭೂಮಿ‌ ಕಬಳಿಕೆ ಮಾಡಲು ಮುಂದಾಗಿದೆ.. ಬೇರೆ ದೇಶಗಳ ಕಂಪನಿಗಳಿಗೋಸ್ಕರ ನಮ್ಮ ಫಲವತ್ತಾದ ಜಮೀನು ಕಬಳಿಕೆ ಮಾಡಲಾಗುತ್ತಿದೆ.. ನಮ್ಮ ಊಟದ ತಟ್ಟೆಯನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ. ಎಲ್ಲೂ‌ ಸಹ ಬಲವಂತವಾಗಿ ಭೂಮಿ‌ ಕಸಿದುಕೊಳ್ಳಬಾರದು ಎಂದರು…

ಸುನೀಲ್ ಕುಮಾರ್, ತಿಮ್ಮೇಗೌಡ, ಪ್ರಭಾ, ರಾಮಕೃಷ್ಣಯ್ಯ, ಮನು, ಕೆಂಪೇಗೌಡ ಸೇರಿಂದರೆ ಸಮಿತಿ ಮುಖಂಡರು, ರೈತರು ಇದ್ದರು…

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

6 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

22 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago