ಮಿತಿ ಮೀರಿದ ಬೈಕ್ ಕಳ್ಳರ ಹಾವಳಿ: ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಜನ ಒತ್ತಾಯ

ದೊಡ್ಡಬಳ್ಳಾಪುರ: ನಗರದಲ್ಲಿ ಬೈಕ್ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಜನಸಂದಣಿ ಇರುವ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರುವ ಬೈಕ್‌ಗಳನ್ನು ಟಾರ್ಗೆಟ್ ಮಾಡುತ್ತಿರುವ ಖದೀಮರು ನಿರಂತರವಾಗಿ ಕಳ್ಳತನ ನಡೆಸುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ನಗರದ ಬಸವಭವನ ಸಮೀಪದ ಎಸ್‌ಎಲ್‌ವಿ ಲಾಡ್ಜ್ ಬಳಿ ಏಪ್ರಿಲ್ 9ರಂದು ರಾತ್ರಿ ಸುಮಾರು 8:39ರ ವೇಳೆಗೆ ಪಲ್ಸರ್ ಬೈಕ್ ನಿಲ್ಲಿಸಿ ಫಾಕ್ಸ್‌ಕಾನ್ ಕಂಪನಿಗೆ ಕೆಲಸಕ್ಕೆ ತೆರಳಿದ್ದ ಬೈಕ್ ಮಾಲೀಕ, ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಮೇ 15ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬೈಕ್ ಕದ್ದ ಆರೋಪಿಯು ಬಸವಭವನ ಪ್ರದೇಶದಿಂದ ದಾಬಸ್‌ಪೇಟೆ ಮಾರ್ಗವಾಗಿ ತುಮಕೂರು ಕಡೆಗೆ ತೆರಳಿರುವುದು ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ನಗರ ಠಾಣಾ ಪೊಲೀಸ್ ಸಿಬ್ಬಂದಿ ಕಳ್ಳನ ಜಾಡು ಹಿಡಿದು ದಾಬಸ್ ಪೇಟೆ, ಕ್ಯಾತಸಂದ್ರ, ತುಮಕೂರು, ಹಿರಿಯೂರು, ಚಿತ್ರದುರ್ಗ, ದಾವಣಗೆರೆ ಬಾರ್ಡರ್ ವರೆಗೂ ಹೋಗಿದ್ದಾರೆ.‌ ಆದರೆ, ಚಾಲಾಕಿ ಕಳ್ಳ ಇನ್ನೂ ಪತ್ತೆಯಾಗಿರುವುದಿಲ್ಲ. ಆದರೆ, ಪೊಲೀಸರು ಕಳ್ಳನ ಪತ್ತೆಯಲ್ಲಿ ಕಾರ್ಯನಿರತರಾಗಿದ್ದಾರೆ…

ನಗರದಲ್ಲಿ ಪದೇಪದೇ ಬೈಕ್ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ರಸ್ತೆ, ವೃತ್ತ, ಕಚೇರಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಬೈಕ್ ಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

 

ವಿಶೇಷ ಸೂಚನೆ

ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡದೇ ನಿಗದಿತ ಪಾರ್ಕಿಂಗ್ ಸ್ಥಳದಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಿದರೆ ಕಳ್ಳತನವನ್ನು ತಡೆಗಟ್ಟಬಹುದು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

10 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago