ಮಿತಿ ಮೀರಿದ ಬೈಕ್ ಕಳ್ಳರ ಹಾವಳಿ: ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಜನ ಒತ್ತಾಯ

ದೊಡ್ಡಬಳ್ಳಾಪುರ: ನಗರದಲ್ಲಿ ಬೈಕ್ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಜನಸಂದಣಿ ಇರುವ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರುವ ಬೈಕ್‌ಗಳನ್ನು ಟಾರ್ಗೆಟ್ ಮಾಡುತ್ತಿರುವ ಖದೀಮರು ನಿರಂತರವಾಗಿ ಕಳ್ಳತನ ನಡೆಸುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ನಗರದ ಬಸವಭವನ ಸಮೀಪದ ಎಸ್‌ಎಲ್‌ವಿ ಲಾಡ್ಜ್ ಬಳಿ ಏಪ್ರಿಲ್ 9ರಂದು ರಾತ್ರಿ ಸುಮಾರು 8:39ರ ವೇಳೆಗೆ ಪಲ್ಸರ್ ಬೈಕ್ ನಿಲ್ಲಿಸಿ ಫಾಕ್ಸ್‌ಕಾನ್ ಕಂಪನಿಗೆ ಕೆಲಸಕ್ಕೆ ತೆರಳಿದ್ದ ಬೈಕ್ ಮಾಲೀಕ, ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಮೇ 15ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬೈಕ್ ಕದ್ದ ಆರೋಪಿಯು ಬಸವಭವನ ಪ್ರದೇಶದಿಂದ ದಾಬಸ್‌ಪೇಟೆ ಮಾರ್ಗವಾಗಿ ತುಮಕೂರು ಕಡೆಗೆ ತೆರಳಿರುವುದು ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ನಗರ ಠಾಣಾ ಪೊಲೀಸ್ ಸಿಬ್ಬಂದಿ ಕಳ್ಳನ ಜಾಡು ಹಿಡಿದು ದಾಬಸ್ ಪೇಟೆ, ಕ್ಯಾತಸಂದ್ರ, ತುಮಕೂರು, ಹಿರಿಯೂರು, ಚಿತ್ರದುರ್ಗ, ದಾವಣಗೆರೆ ಬಾರ್ಡರ್ ವರೆಗೂ ಹೋಗಿದ್ದಾರೆ.‌ ಆದರೆ, ಚಾಲಾಕಿ ಕಳ್ಳ ಇನ್ನೂ ಪತ್ತೆಯಾಗಿರುವುದಿಲ್ಲ. ಆದರೆ, ಪೊಲೀಸರು ಕಳ್ಳನ ಪತ್ತೆಯಲ್ಲಿ ಕಾರ್ಯನಿರತರಾಗಿದ್ದಾರೆ…

ನಗರದಲ್ಲಿ ಪದೇಪದೇ ಬೈಕ್ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ರಸ್ತೆ, ವೃತ್ತ, ಕಚೇರಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಬೈಕ್ ಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

 

ವಿಶೇಷ ಸೂಚನೆ

ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡದೇ ನಿಗದಿತ ಪಾರ್ಕಿಂಗ್ ಸ್ಥಳದಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಿದರೆ ಕಳ್ಳತನವನ್ನು ತಡೆಗಟ್ಟಬಹುದು.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

9 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

1 day ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 day ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 day ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago